WhatsApp Group Join Now

ಬಿಳಿ ತೊನ್ನುರೋಗಕ್ಕೆ: ಬಲಿತ ಅರಿಶಿನ ಕೊಂಬು ಮತ್ತು ಬಲಿತ ಎಕ್ಕದ ಬೇರನ್ನು ತಣ್ಣೀರಿನಲ್ಲಿ ತೇದು ತೊನ್ನಿರುವ ಸ್ಥಳದಲ್ಲಿ ಹಚ್ಚುವುದು. ಶರೀರದ ಸ್ವಲ್ಪ ಭಾಗದಲ್ಲಿ ಪ್ರಥಮವಾಗಿ ಲೇಪಿಸುವುದು. ಗುಣಕಂಡ ಮೇಲೆ ಚಿಕಿತ್ಸೆಯನ್ನು ಮುಂದುವರಿಸುವುದು.

ಕಾಲಾರಾ ಬೇನೆಯಲ್ಲಿ: ಎಕ್ಕದ ಬೇರಿನ ತೊಗಟೆ ಮತ್ತು ಮೆಣಸಿನ ಕಾಳು ಸಮತೂಕ ನುಣ್ಣಗೆ ಚೂರ್ಣಮಾಡಿ, ಹಸಿರು ಶುಂಠಿ ರಸದಲ್ಲಿ ಮರ್ದಿಸಿ ಕಡಲೆ ಗಾತ್ರ ಗುಳಿಗೆಯನ್ನು ಮಾಡಿ ನೆರಳಲ್ಲಿ ಒಣಗಿಸುವುದು. ಪ್ರತಿ ಎರಡು ತಾಸಿಗೊಮ್ಮೆ ಒಂದೊಂದು ಗುಳಿಗೆಯನ್ನು ನೀರಿನೊಂದಿಗೆ ಸೇವಿಸುವುದು.

ಉದರ ಬೇನೆ, ಅಜೀರ್ಣದಲ್ಲಿ: ಇನ್ನೊ ಬಿರಿಯದಿರುವ 20 ಮೊಗ್ಗುಗಳನ್ನು ತಂದು ಶುಂಠಿ, ಓಮದ ಕಾಳು ಮತ್ತು ಕರಿಯ ಲವಣವನ್ನು ಸಮ ಪ್ರಮಾಣದಲ್ಲಿ ಸೇರಿಸಿ, ಶುದ್ಧ ನೀರಿನಲ್ಲಿಅರೆದು ಕಡಲೆ ಗಾತ್ರ ಗುಳಿಗೆಗಳನ್ನು ಮಾಡಿ ನೆರಳಿನಲ್ಲಿ ಒಣಗಿಸುವುದು. ದಿವಸಕ್ಕೆ ಎರಡು ಸಾರಿ ಒಂದೊಂದು ಮಾತ್ರೆಯನ್ನು ಸೇವಿಸಿ ನೀರು ಕುಡಿಯುವುದು.

ವಾಯು ನೋವುಗಳಿಗೆ: ಎಕ್ಕದ ಎಲೆಯರಸ 20 ಗ್ರಾಂ, ಬೊಂತೆ ಕಳ್ಳಿ ರಸ 20ಗ್ರಾಂ, ಲಕ್ಕಿ ಎಲೆ ರಸ, 20 ಗ್ರಾಂ, ಉಮ್ಮತ್ತಿ ಎಲೆ ರಸ 20 ಗ್ರಾಂ, ಹಸುವಿನ ಹಾಲು 60ಮಿ, ಲಿ. ಎಳ್ಳಣ್ಣೆ 120 ಗ್ರಾಂ ಸೇರಿಸಿ ಕಾಯಿಸುವಾಗ, ರಾಸ್ಮಿ, ವಿಳಂಗ, ದೇವದಾರು, ಗಜ್ಜುಗದ ತಿರುಳು ಪುಡಿ ಎರಡೆರಡುಟೀ ಚಮಚ ಹಾಕಿ ಇಳಿಸುವಾಗ 20 ಗ್ರಾಂ ಆರತಿ ಕರ್ಪೂರ ಹಾಕುವುದು. ತಣ್ಣಗಾದ ಮೇಲೆ ಕೀಲು, ಕಾಲು ನೋವುಗಳಿಗೆ ಹಚ್ಚುವುದು.

WhatsApp Group Join Now

Leave a Reply

Your email address will not be published. Required fields are marked *