ಸ್ನೇಹಿತರೆ ದೇಶದಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ಮೊದಲೇ ದೇಶದ ಎಲ್ಲ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳನ್ನು ನೀಡುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದು, ದೇಶದಾದ್ಯಂತ ಇರುವ ದೇಶದ ಎಲ್ಲ ರೈತರ ಖಾತೆಗಳಿಗೆ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆಯಿಂದ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2000 ಹಣ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗುತ್ತಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಲ್ಲಿ ದೇಶದ ರೈತರ ಬಗ್ಗೆ ಈಗಾಗಲೇ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲು ನರೇಂದ್ರ ಮೋದಿಯವರು ಕ್ರಮ ತೆಗೆದುಕೊಂಡಿದ್ದಾರೆ. ಇದೇ ಜುಲೈ ತಿಂಗಳಿನಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಪಿಎಂ ಕಿಸಾನ್ ಹಣದಲ್ಲಿ ಭಾರಿ ಏರಿಕೆ ಮಾಡಿ ದೇಶದ ಎಲ್ಲ ರೈತರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ನರೇಂದ್ರ ಮೋದಿ ಅವರು ರೈತರಿಗೆ ವರ್ಷಕ್ಕೆ ₹6000 ನೀಡದಿರುವುದು ಇತ್ತೀಚೆಗೆ ಹಣದುಬ್ಬರದಿಂದಾಗಿ ಈ ಹಣ ರೈತರಿಗೆ ಯಾವ ಕೆಲಸಕ್ಕೂ ಸಮರ್ಪಕವಾಗಿ ಉಪಯೋಗಕ್ಕೆ ಬರ್ತಾ ಇಲ್ಲ ಎಂದು ಗಮನಿಸಿದ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಹಣದಲ್ಲಿ ಭಾರಿ ಬದಲಾವಣೆಯನ್ನು ಮಾಡಿ ₹6000 ಬದಲಿಕೆ ಇನ್ನು ಕೂಡ ಹೆಚ್ಚಿಗೆ ನೀಡೋಕೆ.

ಈಗಾಗಲೇ ಕೇಂದ್ರ ಕೃಷಿ ಇಲಾಖೆ ಹಾಗೂ ಹಣಕಾಸು ಇಲಾಖೆಯೊಂದಿಗೆ ಚರ್ಚೆ ಮಾಡಲಾಗಿತ್ತು. ಈ ಬಾರಿ ಮಂಡಿಸುವ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್ ಇರಲಿದೆ.ಈ ಬಾರಿ ಮಂಡಿಸಿದ ಇರುವಂತಹ ಈ ತಿಂಗಳ ಬಜೆಟ್ ನಲ್ಲಿ ರೈತರಿಗೆ ನೀಡ್ತಾ ಇರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಆ ಹಣದಲ್ಲಿ ಎಷ್ಟು ಏರಿಕೆ ಮಾಡಲಾಗುತ್ತದೆ ಮತ್ತು ನಾಲ್ಕು ತಿಂಗಳಿಗೊಮ್ಮೆ ನೀಡುತ್ತಿರುವ ಈ ಹಣ ಇನ್ನು ಮುಂದೆ ಎಷ್ಟು ತಿಂಗಳಿಗೆ ಒಮ್ಮೆ ಜಮಾ ಆಗುತ್ತೆ ಹಾಗು ಪಿಎಂ ಕಿಸಾನ್ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿರುವ ರೈತರಿಗೆ ಹಣ ಯಾವಾಗ ಬರುತ್ತದೆ?

ಇಷ್ಟಕ್ಕೂ ಯಾವಾಗಿನಿಂದ ರೈತರ ಖಾತೆಗಳಿಗೆ ಎಷ್ಟು ಹಣ ಬಿಡುಗಡೆ ಮಾಡಲು ಈ ಬಾರಿ ಬಜೆಟ್ ನಲ್ಲಿ ನಿರ್ಧರಿಸಲಾಗಿದೆ. ಮಾಹಿತಿ ನೋಡೋಣ .ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ರೈತರಿಗೆ ವಾರ್ಷಿಕ ₹6000 ನೆರವು ನೀಡುವ ಮೊತ್ತವನ್ನ ₹8000 ಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈ ಬಾರಿಯ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

ರೈತರಿಗೆ ನೀಡಲಾಗುತ್ತಿರುವ ಧನಸಹಾಯ ಮೊತ್ತದಲ್ಲಿ ಏರಿಕೆ ಮಾಡುವ ಕುರಿತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ.2024 ನೇ ಸಾಲಿನ ಬಜೆಟ್ ನಲ್ಲಿ ರೈತರಿಗೆ ನೀಡಲಾಗುತ್ತಿರುವ ನೇರವಾಗಿ ಬ್ಯಾಂಕ್ ಖಾತೆಗೆ ನಾಲ್ಕು ತಿಂಗಳಿಗೊಮ್ಮೆ 2000 ರೂಪಾಯಿಯಂತೆ ಕಂತಿನ ಮೂಲಕ ಧನ ಸಹಾಯ ನೀಡಲು ಸರ್ಕಾರ ಚಿಂತನೆ ನಡೆಸುತ್ತಾ ಇದೆ. ಈಗಾಗಲೇ ಸರಿ ಸುಮಾರು 11 ಕೋಟಿ ರೈತ ಬಾಂಧವರು ಈ ಯೋಜನೆ ಲಾಭವನ್ನು ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *